ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಇಂದಿನ ಈ ಲೇಖನದ ಮೂಲಕ ಹವಾಮಾನ ಇಲಾಖೆ ನೀಡಿದ ಮೂನ್ಸೂಚನೆ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಇನ್ನು ಕೆಲವು ದಿನಗಳಲ್ಲಿ ಮುಂಗಾರು ಮಳೆ ಪ್ರಾರಂಭವಾಗುತ್ತದೆ. ಕರಾವಳಿಯ ಭಾಗದಲ್ಲಿ ಸೈಕ್ಲೋನ್ ಸಂಭವಿಸಲಿದ್ದು ಕರ್ನಾಟಕದ ಹಲವು ಭಾಗಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ. ಹವಾಮಾನ ಇಲಾಖೆಯು ಕರ್ನಾಟಕದ ಈ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಿದೆ. ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಯಲು ನಮ್ಮ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.
ಹವಮಾನ ಇಲಾಖೆಯು ನದಿ ಹಾಗೂ ಸಮುದ್ರದ ಸುತ್ತಮುತ್ತಲಿನಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆಯನ್ನು ನೀಡಿದೆ. ಅರಬ್ಬೀ ಸಮುದ್ರದಲ್ಲಿ ಕೆಲ ದಿನಗಳಿಂದ ವಾಯುಭಾರ ಕುಸಿತಗೊಂಡಿರುವ ಕಾರಣ ಚಂಡಮಾರುತವಾಗಿ ರೂಪುಗೊಂಡಿದೆ. ಮುಂದಿನ 24 ಗಂಟೆಗಳ ಕಾಲ ಇದೇ ರೀತಿಯಲ್ಲಿ ಹವಾಮಾನವಿದ್ದರೆ ಕರಾವಳಿಗೆ ಬಿಪೋರ್ಜಾಯ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹೆಚ್ಚಾಗಿ ಕಂಡುಬರುತ್ತದೆ. ಈ ಹೊಸ ಚಂಡಮಾರುತಕ್ಕೆ ಬಾಂಗ್ಲಾದೇಶ ‘ಬಿಪೋರ್ಜಾಯ್’ ಅಂತ ಹೆಸರನ್ನು ನೀಡಿದೆ.
Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಈ ಬಿಪೋರ್ಜಾಯ್ ಚಂಡಮಾರುತದಿಂದಾಗಿ ರಾಜ್ಯಕ್ಕೆ ಮಳೆ ಪ್ರಾರಂಭವಾಗುವುದು ಮತ್ತಷ್ಟು ನಿಧಾನವಾಗಲಿದೆ. ಮುಂದಿನ 24 ಗಂಟೆಯಲ್ಲಿ ಚಂಡಮಾರುತ ಅಪ್ಪಳಿಸಲಿದ್ದು, ಇದರಿಂದ ದಕ್ಷಿಣ ಭಾರತದ ಪಶ್ಚಿಮ ತೀರಗಳು ಅಪಾಯವನ್ನು ಎದುರಿಸಲಿವೆ ಎಂದು ಹವಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ. ಉತ್ತರದತ್ತ ಮುಖ ಮಾಡಿರುವ ಚಂಡಮಾರುತ ಜೂನ್ 8 ರಿಂದ ಜೂನ್ 10ರವರೆಗೆ ಕರ್ನಾಟಕದ ಕರಾವಳಿಯಲ್ಲಿಯೂ ಚಂಡಮಾರುತದ ವಾತಾವರಣ ಇರಲಿದೆ. ಮುಂದಿನ 24 ಗಂಟೆಗಳಲ್ಲಿ ಬಿಪೋರ್ಜಾಯ್ ತೀವ್ರತೆ ಹೆಚ್ಚಾಗಲಿದ್ದು, ಹವಾಮಾನ ಇಲಾಖೆಯು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.
ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಜಿಲ್ಲೆಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಜೂನ್ 8ರ ಬೆಳಗಿನ ವೇಳೆಗೆ ಸೈಕ್ಲೋನಿಕ್ ಚಂಡಮಾರುತವು ಬಿಪೋರ್ಜಾಯ್ ಚಂಡಮಾರುತವಾಗಿ ಬದಲಾಗಲಿದ್ದು, ಜೂನ್ 9ರ ಸಂಜೆ ವೇಳೆಗೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಾಗಲಿದೆ ಎಂದು ಇಲಾಖೆ ತಿಳಿಸಿದೆ. ಈ ಚಂಡಮಾರುತದ ನೇರ ಪರಿಣಾಮ ಕೇರಳ-ಕರ್ನಾಟಕ ಮತ್ತು ಲಕ್ಷದ್ವೀಪ-ಮಾಲ್ಡೀವ್ಸ್ ಕರಾವಳಿಯಲ್ಲಿ ಹೆಚ್ಚಾಗಿ ಕಂಡುಬರಲಿದೆ. ಇದರ ಜೊತೆ ಕೊಂಕಣ-ಗೋವಾ-ಮಹಾರಾಷ್ಟ್ರ ಕರಾವಳಿ ತೀರದಲ್ಲಿ ನಾಳೆಯಿಂದ ಜೂನ್ 10ರವರೆಗೆ ಸಮುದ್ರದಲ್ಲಿ ಅತಿ ಎತ್ತರದ ಅಲೆಗಳು ಏಳುವ ಸಾಧ್ಯತೆ ಹೆಚ್ಚಾಗಿದೆ.
ದಕ್ಷಿಣ ಒಳಕರ್ನಾಟಕದ ಕೆಲವು ಸ್ಥಳಗಳಲ್ಲಿ, ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ, ಬೀದರ್, ಬಾಗಲಕೋಟೆ, ಹಾವೇರಿ, ಕೊಪ್ಪಳ, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಮಧ್ಯೆ ಬೆಂಗಳೂರು ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆಯೆಂದು ಬಾರತೀಯ ಹವಮಾನ ಇಲಾಖೆಯು ಎಚ್ಚರಿಕೆ ನೀಡಿದೆ.
ಪ್ರಮುಖ ಲಿಂಕ್ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಇತರೆ ವಿಷಯಗಳು
7th Pay Commission: ಸರ್ಕಾರಿ ನೌಕರರಿಗೆ ಈ ಬಾರಿ ಡಬಲ್ ಧಮಾಕ; ಡಿಎ ಜೊತೆಗೆ ಫಿಟ್ಮೆಂಟ್ ಫ್ಯಾಕ್ಟರ್ ಕೂಡ ಹೆಚ್ಚಳ