News

ಗ್ಯಾರಂಟಿ ಬೆನ್ನಲ್ಲೇ ಮಹಿಳೆಯರಿಗೆ ಮತ್ತೊಂದು ಗುಡ್‌ ನ್ಯೂಸ್! ಸ್ತ್ರೀ ಶಕ್ತಿ ಸಂಘದ ಸಂಪೂರ್ಣ ಸಾಲ ಮನ್ನಾ, ಸಿಎಂ ಮಹತ್ವದ ಹೇಳಿಕೆ

Published

on

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಸಂತಸದ ಸುದ್ದಿಯನ್ನು ತಿಳಿಸಲಿದ್ದೇವೆ. ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಹಲವು ಭಾಗಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ತ್ರೀ ಶಕ್ತಿ ಸಂಘ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರು. ಆದರೆ ಮುಂದಿನ ವರ್ಷ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದಾರೆ.

Stree shakti Sangha loan waiver

ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯನವರು ಮುಂದಿನ ವರ್ಷ ಎಲ್ಲಾ ಸ್ತ್ರೀಶಕ್ತಿ ಸಂಘಗಳ ಸಾಲವನ್ನು ಮನ್ನಾ ಮಾಡುತ್ತೇವೆ ಎಂದು ರಾಜ್ಯದ ಮಹಿಳೆಯರಿಗೆ ಭರವಸೆಯನ್ನು ನೀಡಿದ್ದಾರೆ. ಸ್ತ್ರೀಶಕ್ತಿ ಸಂಘದ ಮಹಿಳೆಯರು ಸಿದ್ದರಾಮಯ್ಯನವರನ್ನು ಭೇಟಿ ಮಾಡಿವ ಮೂಲಕ ಸಾಲಮನ್ನಾದ ಬಗ್ಗೆ ಮನವಿಯನ್ನು ಸಲ್ಲಿಸಿದರು. ಆದರೆ ನಾನು ಚುನಾವಣೆಯ ವೇಳೆ ಭರವಸೆಯನ್ನು ನೀಡಿರುವುದು ನಿಜ ಆದರೆ ಮುಂದಿನ ವರ್ಷ ಇದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂಬ ಭರವಸೆಯ ಮೂಲಕ ಕಳುಹಿಸಿದ್ದಾರೆ.

Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾಕ್ಕೆ 2,400 ಕೋಟಿ

ರಾಜ್ಯಾದ್ಯಂತ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಲು 2,400 ಕೋಟಿ ವೆಚ್ಚವಾಗುತ್ತದೆ. ಹೀಗಾಗಿ ಈ ವರ್ಷ ಸಾಲ ಮನ್ನಾ ಮಾಡಲು ಆಗುವುದಿಲ್ಲ ಮುಂದಿನ ವರ್ಷ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸ್ತ್ರೀಶಕ್ತಿ ಸಂಘದ ಮಹಿಳೆಯರಿಗೆ ಭರವಸೆ ನೀಡಿದ್ದಾರೆ. ಇದಕ್ಕೆ ಮಹಿಳೆಯರು ಇವತ್ತು ಅಥವಾ ನಾಳೆ ಸಂಘದ ಮಹಿಳೆಯರ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ.

ಸಾಲ ವಸೂಲಿಗೆ ಬಂದವರ ಮೇಲೆ ಹಲ್ಲೆ

ಬ್ಯಾಂಕ್ ಗಳು ಮಹಿಳಾ ಸ್ತ್ರೀಶಕ್ತಿ ಸಂಘಗಳಿಗೆ ಸಾಲ ನೀಡುವುದು ಮತ್ತು ವಸೂಲಿ ಮಾಡುವುದು ಸರ್ವೇ ಸಾಮಾನ್ಯ. ಆದರೆ ಕೋಲಾರದಲ್ಲಿ ಮಹಿಳಾ ಸಂಘಕ್ಕೆ ಸಾಲ ನೀಡಿದ್ದನ್ನು ವಸೂಲಿ ಮಾಡಲು ಬಂದ DCC ಬ್ಯಾಂಕ್‌ ಸಿಬ್ಬಂದಿಯ ಬೈಕನ್ನು ಸುಟ್ಟುಹಾಕುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಮೂಲಬಾಗಿಲು ತಾಲೂಕಿನ ಬಿಸ್ನಹಳ್ಳಿ ಗ್ರಾಮದಲ್ಲಿ‌ ಕಳೆದವಾರ ಈ ಘಟನೆ ನಡೆದಿದೆ. ಕೋಲಾರದ ಜಿಲ್ಲೆಯ ಸ್ತ್ರೀಶಕ್ತಿ ಸಂಘದ ಮಹಿಳೆಯರು ಗೋಕುಂಟೆ ಎಂಬ ಸೊಸೈಟಿಯಲ್ಲಿ ಸಾಲ ಪಡೆದಿದ್ದರು. ಸೊಸೈಟಿ ಸಿಬ್ಬಂದಿ ಜೋಸೆಪ್ ಎನ್ನುವವರು ಸಾಲ ವಸೂಲಿಗೆಂದು ಬಂದಾಗ ಮಹಿಳೆಯರು ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿ ಜೊತೆಗೆ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು.

ಪ್ರಮುಖ ಲಿಂಕ್ ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಮುಖ್ಯಮಂತ್ರಿ ಮಹಿಳಾ ಸಂಘದ ಸಾಲ ಮನ್ನಾ ಮಾಡಲಿ 

ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯನವರು ಎಲ್ಲಾ ಸ್ತ್ರೀಶಕ್ತಿ ಸಂಘಗಳ ಸಾಲವನ್ನು ಮಾನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದರು. ಆದ್ದರಿಂದ ನಾವು ಸಾಲವನ್ನು ಮರುಪಾವತಿ ಮಾಡುವುದಿಲ್ಲ ಈ ಮೂಲಕ ನೀವು ಹೇಳಿದಂತೆ ಈ ಮಹಿಳಾ ಸಂಘಗಳ ಸಾಲವನ್ನು ಮನ್ನಾ ಮಾಡಬೇಕು. ದಿನದಿಂದ ದಿನಕ್ಕೆ ಈ ಸಾಲಮನ್ನಾದ ವಿಚಾರದ ಬಗ್ಗೆ ಚರ್ಚೆಗಳು ಹೆಚ್ಚಾಗುತ್ತಿದೆ. ಈ ಸಂಘಗಳ ಸಾಲ ವಸೂಲಿ ತೀವ್ರ ವಿಕೋಪದ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈಗ ಸಿದ್ದರಾಮಯ್ಯನವರೇ ಮುಂದಿನ ವರ್ಷ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಇತರೆ ವಿಷಯಗಳು

ಚಿಕನ್ ದರದಲ್ಲಿ ಮತ್ತೆ ಭಾರೀ ಹೆಚ್ಚಳ! ಕೋಳಿ ಬೆಲೆ ನೋಡಿ ಕಂಗಾಲಾದ ಮಾಂಸ ಪ್ರಿಯರು

ತಂದೆ – ತಾತನ ಆಸ್ತಿ ಮಾರಾಟ ಮಾಡಲು ಈ ವಾರಸುದಾರರ ಒಪ್ಪಿಗೆ ಕಡ್ಡಾಯ! ಒಪ್ಪಿಗೆ ಇಲ್ಲದೆ ಪಡೆದುಕೊಂಡರೆ ಸಂಪೂರ್ಣ ಆಸ್ತಿ ಸರ್ಕಾರದ ಪಾಲು

ಗೃಹಲಕ್ಷ್ಮಿಯರಿಗೆ ರೆಡಿಯಾಯ್ತು ಹೊಸ ಆ್ಯಪ್; ಜೂನ್ 28 ರಂದು ಸಂಪುಟ ಸಭೆಯಲ್ಲಿ ಚರ್ಚಿಸಿ ಆ್ಯಪ್ ಬಿಡುಗಡೆಗೆ ಸಜ್ಜು

Treading

Load More...
ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ